ಶ್ರೀಲಂಕಾ ರಾಜಧಾನಿಯಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಪೋಟದಲ್ಲಿ ಕರ್ನಾಟಕ ಮೂಲದ ಇಬ್ಬರು ಸಾವನ್ನಪ್ಪಿದ್ಧಾರೆ.ಈ ಬಗ್ಗೆ ಶ್ರೀಲಂಕಾ ಸರ್ಕಾರ ಟ್ವೀಟ್ ಮಾಡಿದ್ದು, ಇಬ್ಬರು ಕನ್ನಡಿಗರು ಸಾವನ್ನಪ್ಪಿರುವುದನ್ನು ಸ್ಪಷ್ಟಪಡಿಸಿದೆ. ಅದನ್ನು ರೀಟ್ವೀಟ್ ಮಾಡುವ ಮೂಲಕ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕೂಡ ಮರು ಸ್ಪಷ್ಟನೆ ನೀಡಿದ್ಧಾರೆ. ಮೃತರನ್ನು ನೆಲಮಂಗಲ ಮೂಲದ ಕೆ.ಜಿ ಹನುಮಂತರಾಯಪ್ಪ ಮತ್ತು ರಂಗಪ್ಪ ಎಂದು ಗುರುತಿಸಲಾಗಿದೆ.