ಹಾಸನ ಜಿಲ್ಲಾಧಿಕಾರಿ ಜತೆ ವೈಯಕ್ತಿಕ ಕಾರಣಗಳಿಂದ ಹೊಡೆದಾಟ ಮಾಡಿಲ್ಲ. ಜನರ ಸಮಸ್ಯೆಗಳ ಬಗ್ಗೆ ಮಾತ್ರ ಮಾತನಾಡಿದ್ದೇನೆ. ರೈತರಿಗೆ ತೊಂದರೆಯಾಗದಂತೆ ಕ್ರಮವಹಿಸಿ ಎಂದು ಹೇಳಿದ್ದೇನೆ. ಬಿತ್ತನೆ ಆಲೂಗಡ್ಡೆ ಬಗ್ಗೆ ಸಮಸ್ಯೆಯಾಗಬಾರದು. ಈ ಹಿಂದೆ ಇದೇ ಕಾರಣಕ್ಕೆ ಗೋಲಿಬಾರ್ ಆಗಿತ್ತು. ಹಿಂದಿನ ಜಿಲ್ಲಾಧಿಕಾರಿಗಳಿಗೆ ಇದರ ಬಗ್ಗೆ ಎಲ್ಲಾ ಮಾಹಿತಿ ಇದೆ ಎಂದು ಸಚಿವ ಎಚ್.ಡಿ.ರೇವಣ್ಣ ಹೇಳಿದರು.