ಕೇಂದ್ರ ಸರ್ಕಾರದ ಪೌರತ್ವ ನಿಷೇಧ ಕಾಯ್ದೆಯನ್ನು ವಿರೋಧಿಸಿ ಗೌರಿ ಮೀಡಿಯಾ ಮತ್ತು ಖ್ಯಾತ ಇತಿಹಾಸಕಾರ ರಾಮಚಂದ್ರ ಗುಹಾ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲೂ ಸಹ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ, ಟೌನ್ಹಾಲ್ ಬಳಿ ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಹತ್ತಿಕ್ಕಿದ ಪೊಲೀಸರು ಸೆಕ್ಷನ್ 144ರ ನೆಪವೊಡ್ಡಿ ರಾಮಚಂದ್ರ ಗುಹಾ ಸೇರಿದಂತೆ ಎಲ್ಲಾ ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.