ಬಿಜೆಪಿ ಸರ್ಕಾರ ಹೋಗಬಾರದು ಎನ್ನುವುದು ಕುಮಾರಸ್ವಾಮಿಯವರ ಮನಸ್ಸಿನಲ್ಲಿದೆ. ಕುಮಾರಸ್ವಾಮಿ ಒಮ್ಮೊಮ್ಮೆ ದುಡುಕುತ್ತಾರೆ. ಎಮೋಷನಲ್ ಆಗುತ್ತಾರೆ. ಹಿಂದೆ-ಮುಂದೆ ವಿಚಾರ ಮಾಡದೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಹೀಗಾಗಿ ಜೆಡಿಎಸ್ ಶಾಸಕರಲ್ಲಿ ಗೊಂದಲವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ಆಗಬಾರದು. ಬಿಜೆಪಿ ಸರ್ಕಾರ ಮುಂದುವರಿಯಲಿ ಎನ್ನುವುದು ಉತ್ತಮ ವಿಚಾರ. ಬಹುತೇಕ ಜೆಡಿಎಸ್ ಶಾಸಕರು ಬಿಜೆಪಿಗೆ ಬೆಂಬಲ ಕೊಡುವುದರ ಪರವಾಗಿ ನಿಲುವು ಹೊಂದಿದ್ದಾರೆ. ಕುಮಾರಸ್ವಾಮಿಯವರು ಎಲ್ಲರ ಸಭೆ ಕರೆದು ಒಟ್ಟಾಗಿ ಚರ್ಚಿಸಿ, ತೀರ್ಮಾನಿಸಬೇಕು. ಉಪ ಚುನಾವಣೆಯಲ್ಲಿ ಕೆಲವು ಕಡೆ ಬಿಜೆಪಿಗೆ ಬೆಂಬಲ ಕೊಡಬೇಕು ಅನ್ನುವ ಚಿಂತನೆಯೂ ಇದೆ. ಅದಕ್ಕೆ ದೇವೇಗೌಡರು ಒಪ್ಪಬೇಕಲ್ಲಾ? ರಾಜಕೀಯದಲ್ಲಿ ಯಾವಾಗ ಏನಾಗುತ್ತೊ ಗೊತ್ತಾಗಲ್ಲ. ಸಿದ್ದರಾಮಯ್ಯ ಮೇಲೆ ಕುಮಾರಸ್ವಾಮಿಯವರಿಗೆ ಪೂರ್ಣ ವಿಶ್ವಾಸವಿತ್ತು. ಆದರೂ ಸಮ್ಮಿಶ್ರ ಸರ್ಕಾರ ಉಳಿಯಲಿಲ್ಲ ಎಂದು ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.