ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದೆ. ಸಕಲೇಶಪುರ ತಾಲೂಕಿನ ಮುಗಲಿ ಗ್ರಾಮದಲ್ಲಿ ಭಾರೀ ಮಳೆಗೆ ರಸ್ತೆ ಕೊಚ್ಚಿ ಹೋಗಿದೆ. ಹತ್ತಾರು ಹಳ್ಳಿಗಳು ಸಕಲೇಶಪುರ ಪಟ್ಟಣದ ಸಂಪರ್ಕ ಕಳೆದುಕೊಳ್ಳುವ ಸ್ಥಿತಿ ಎದುರಾಗಿದೆ. ಎತ್ತಿನಹೊಳೆ ಯೋಜನೆ ಕಾಮಗಾರಿ ವಾಹನಗಳಿಂದ ರಸ್ತೆ ಹಾಳಾಗಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.